ಅರ್ಜಿಯಲ್ಲಿ, ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದರೂ ಕೂಡ ಪ್ರಿಯಾಂಕಾ ಶರ್ಮ ಅವರನ್ನು ಬಿಡುಗಡೆ ಮಾಡುವಲ್ಲಿ ಸರ್ಕಾರ ಒಂದು ದಿನಕ್ಕೂ ಹೆಚ್ಚು ಸಮಯ ವಿಳಂಬ ಮಾಡಿತ್ತು ಎಂದು ಆರೋಪಿಸಿ ಪ್ರಿಯಾಂಕಾ ಶರ್ಮ ಅವರ ಸೋದರ ರಾಜಿಬ್ ಶರ್ಮ ಕೋರ್ಟ್ ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಸಂಬಂಧಪಟ್ಟ ಇತರರಿಗೆ ಶೋಕಾಸ್ ನೊಟೀಸ್ ಜಾರಿ ಮಾಡಿದೆ.