ಹಲವು ದಶಕಗಳಿಂದ ಕೇರಳ ಆರ್ಥಿಕತೆಯ ಬೆನ್ನೆಲುಬಾಗಿರುವ ಅನಿವಾಸಿ ಕೇರಳಿಗರಿಗೆ ಮತದಾನದ ಹಕ್ಕು ದೊರೆಯಬೇಕು, ಅನಿವಾಸಿ ಭಾರತೀಯರಿಗೆ ಮತದಾನ ಮಾಡುವ ಹಕ್ಕನ್ನು ಲೋಕಸಭೆಯಲ್ಲೂ ಅಂಗೀಕರಿಸಲಾಗಿದೆ. ಆದ್ದರಿಂದ ಅನಿವಾಸಿ ಕೇರಳಿಗರಿಗೂ ಮತದಾನ ಮಾಡುವ ಹಕ್ಕು ದೊರೆಯಬೇಕೆಂದು ವಿಪಕ್ಷದ ಉಪನಾಯಕ ಎಂ.ಕೆ ಮುನೀರ್ ಆಗ್ರಹಿಸಿದರು. ಈ ಹಿನ್ನೆಲೆಯಲ್ಲಿ ಪಿಣರಾಯಿ ವಿಜಯನ್ ಸದನಕ್ಕೆ ಮಾಹಿತಿ ನೀಡಿದ್ದಾರೆ.