ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಸಲ್ಮಾನ್ ಖಾನ್ ನಿರಂತರವಾಗಿ ವಿಚಾರಣೆಗೆ ಗೈರಾಗುತ್ತಿದ್ದು, ಇದರಿಂದ ಆಕ್ರೋಶಗೊಂಡಿರುವ ನ್ಯಾಯಾಲಯ ಸಲ್ಮಾನ್ ಖಾನ್ ಗೆ ಖಡಕ್ ಎಚ್ಚರಿಕೆ ನೀಡಿದೆ. ಇಂದು ಪ್ರಕರಣದ ವಿಚಾರಣೆ ನಡೆಸಿದ ಜೋಧ್ ಪುರ ನ್ಯಾಯಾಲಯದ ನ್ಯಾಯಮೂರ್ತಿ ಚಂದ್ರಕುಮಾರ್ ಸೊಂಗಾರ ಅವರು, ಮುಂದಿನ ವಿಚಾರಣೆಗೆ ಸಲ್ಮಾನ್ ಖಾನ್ ಖುದ್ಧು ಹಾಜರಾಗಬೇಕು. ಇಲ್ಲವಾದಲ್ಲಿ ಅವರಿಗೆ ನೀಡಿರುವ ಜಾಮೀನು ಅನ್ನು ನಿರಾಕರಿಸಲಾಗುತ್ತದೆ ಎಂದು ಹೇಳಿದ್ದಾರೆ.