ವೈದ್ಯರು ದೇಶದ ಸಂಪತ್ತಾಗಿದ್ದು, ನಮ್ಮ ಸೂಪರ್ ಹಿರೋ ಆಗಿದ್ದಾರೆ. ವೈದೋ ಹರಿ ಎಂಬ ನಂಬಿಕೆ ಹೊಂದಿದ್ದೇವೆ. ವೈದ್ಯಕೀಯ ಸಿಬ್ಬಂದಿಯನ್ನು ರಕ್ಷಿಸಲು ಕಠಿಣ ಕಾನೂನನ್ನು ಜಾರಿಗೆ ತರಬೇಕಾಗಿದೆ. ವೈದ್ಯರ ಮೇಲೆ ಹಲ್ಲೆ ಮಾಡುವವರನ್ನು ಕಪ್ಪು ಪಟ್ಟಿಗೆ ಸೇರಿಸುವ ಕಾನೂನನ್ನು ಜಾರಿಗೆ ತರಬೇಕಾಗಿದೆ. ವೈದ್ಯರ ಮೇಲೆ ಹಲ್ಲೆ ನಡೆಸುವವರಿಗೆ ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಸೌಕರ್ಯಗಳಿಂದ ತಪ್ಪಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.