ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶುಕ್ರವಾರ ಭಾರತೀಯ ಸೇನೆ ಮತ್ತು ಉಗ್ರರ ನಡುವೆ ನಡೆದ ಎನ್ಕೌಂಟರ್ನಲ್ಲಿ ಹಿಜ್ಜುಲ್ ಮುಜಾಹಿದ್ದೀನ್ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಇಮಾನ್ ಸಾಹಿಬ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸೇನೆ ಇಂದು ಬೆಳಗ್ಗೆ ಕಾರ್ಯಾಚರಣೆ ಆರಂಭಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಸೇನೆ ಓರ್ವ ಉಗ್ರನನ್ನು ಹೊಡೆದುರುಳಿಸಿದೆ.
ಹತ್ಯೆಯಾದ ಉಗ್ರನನ್ನು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಸಮೀರ್ ಸೆಹ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.