ನರೇಂದ್ರ ಮೋದಿ ಗುಜರಾತಿನಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಹರೇನ್ ಪಾಂಡ್ಯ ಅವರ ಸರ್ಕಾರದಲ್ಲಿ ಸಚಿವರಾಗಿದ್ದರು.ಮಾರ್ಚ್ 26, 2003 ರಂದು ಅಹಮದಾಬಾದ್ ನ ಸಮೀಪದ ಲಾ ಗಾರ್ಡನ್ ನಲ್ಲಿ ಬೆಳಗಿನ ವಾಕಿಂಗ್ ಮಾಡುವಾಗ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದು ಹಾಕಿದ್ದರು.2002ರಲ್ಲಿ ಗುಜರಾತಿನಲ್ಲಿ ನಡೆದಿದ್ದ ಕೋಮು ಗಲಭೆಗೆ ಪ್ರತೀಕಾರ ತೀರಿಸಿಕೊಳ್ಳುವ ಸಲುವಾಗಿ ಈ ಹತ್ಯೆ ನಡೆದಿತ್ತೆಂದು ಸಿಬಿಐ ವಾದಿಸಿತ್ತು.