ಅವರು ಇಂದು ತಮ್ಮ ಸ್ವಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಮಾತನಾಡಿ, ಇದರ ಅಗತ್ಯವಾದರೂ ಏನೆಂದು ಕೆಲವರು ಕೇಳುತ್ತಾರೆ, ಇಂತವರನ್ನು ವೃತ್ತಿಪರ ನಿರಾಶಾವಾದಿಗಳು ಎಂದು ಕರೆಯುತ್ತೇವೆ ಎಂದರು. 5 ಟ್ರಿಲಿಯನ್ ಆರ್ಥಿಕತೆ ಎಂದರೇನು, ಅದು ಹೇಗೆ ಭಾರತದ ಪ್ರತಿಯೊಬ್ಬ ನಾಗರಿಕರಿಗೆ ಸಂಬಂಧಿಸುತ್ತದೆ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಪ್ರಧಾನಿ ಹೇಳಿದರು.