ಕೋಲ್ಕತ್ತಾ: ಪಶ್ಚಿಮ ಬಂಗಾಳ ಸಾಧಿಪುರದ ಕಂಟೇನರ್ ವೊಂದರಲ್ಲಿ ದುಷ್ಕರ್ಮಿಗಳು ಬಚ್ಚಿಟ್ಟಿದ್ದ 27 ದೇಸಿ ಬಾಂಬ್ ಗಳನ್ನು ಬಾಂಬ್ ನಿಷ್ಕ್ರಿಯ ದಶದಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸಾಧಿಪುರದ ಜಾಮ್ ಥೋಲಿಯಾ ಎಂಬಲ್ಲಿ ಬಿಜೆಪಿ (ಭಾರತೀಯ ಜನತಾ ಪಾರ್ಟಿ) ಕಾರ್ಯಾಲಯದ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ ಬೆನ್ನಲ್ಲೆ ಶುಕ್ರವಾರ ದೇಸಿ ಬಾಂಬ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 10 ಜನರನ್ನು ಬಂಧಿಸಲಾಗಿದೆ.