ಈರೋಡ್ ಮೂಲದ ಸಾಮಾಜಿಕ ಹೋರಾಟಗಾರ ಮುಗಿಲನ್ , ಲೋಕೋಪಯೋಗಿ ಇಲಾಖೆಯಲ್ಲಿನ ಉದ್ಯೋಗಕ್ಕೆ 1996ಕ್ಕೆ ರಾಜೀನಾಮೆ ನೀಡಿ, ಭ್ರಷ್ಟಾಚಾರ ಹಾಗೂ ಪರಿಸರಕ್ಕೆ ಸಂಬಂಧಿಸಿದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. 23 ವರ್ಷಗಳಿಂದ ನಾನಾ ಕಾರಣಗಳಿಂದಾಗಿ ಹೋರಾಟ ನಡೆಸುತ್ತಾ ಬಂದಿರುವ ಮುಗಿಲನ್ ಗೆ ಹಲವು ಬಾರಿ ಜೀವ ಬೆದರಿಕೆ ಬಂದಿದ್ದು, ಅಕ್ರಮ ಬಂಧನದಿಂದ ಒಂದು ವರ್ಷ ಜೈಲುವಾಸ ಅನುಭವಿಸಿದ್ದಾರೆ.