ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠ ಅಯೋಧ್ಯೆ ಭೂವಿವಾದ ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ನೇತೃತ್ವದ ಪೀಠ ನಿವೃತ್ತ ನ್ಯಾಯಮೂರ್ತಿ ಖಲೀಫುಲ್ಲಾ ನೇತೃತ್ವದ ತ್ರಿಸದಸ್ಯ ಸಂಧಾನ ಸಮಿತಿಗೆ, ಸಂಧಾನ ಪ್ರಕ್ರಿಯೆಯ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಮುಂಬರುವ ಜುಲೈ 18ರೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದ್ದು, ಅದೇ ದಿನಕ್ಕೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.