ಕಳೆದ 18 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಂಸತ್ತಿನ ಕೆಳಮನೆ ಸುಧೀರ್ಘವಾಗಿ ಕಲಾಪ ನಡೆಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಟ್ವೀಟ್ ಮಾಡಿದ್ದಾರೆ.ಲೋಕಸಭೆಯಲ್ಲಿ ರೈಲ್ವೆ ಅನುದಾನಗಳ ಬೇಡಿಕೆ ಮೇಲಿನ ಚರ್ಚೆ ಗುರುವಾರ ಮಧ್ಯರಾತ್ರಿಯವರೆಗೆ ನಡೆಯಿತು. ತಮ್ಮ ಲೋಕಸಭಾ ಕ್ಷೇತ್ರಗಳಿಗೆ ಅನುದಾನ ಹೆಚ್ಚಿಸಬೇಕು ಹಾಗೂ ರೈಲ್ವೆ ಕುರಿತ ಸರ್ಕಾರದ ನೀತಿಯ ಕುರಿತು ಸದಸ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.