ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರ ಹಿರಿಯ ನಾಯಕರಾದ ಸುಶಿಲ್ ಕುಮಾರ್ ಶಿಂಧೆ, ಮಲ್ಲಿಕಾರ್ಜುನ ಖರ್ಗೆ, ಜ್ಯೋತಿರಾಧಿತ್ಯ ಸಿಂಧ್ಯ, ಸಚಿನ್ ಪೈಲಟ್ ಅವರ ಹೆಸರುಗಳು ಹೆಚ್ಚಾಗಿ ಕೇಳಿಬಂದಿದ್ದವು. ಇವೆಲ್ಲದರ ನಡುವೆ ಇದೀಗ ಪಕ್ಷದ ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ 59 ವರ್ಷದ ದಲಿತ ನಾಯಕ ಮುಕುಲ್ ವಾಸ್ಲಿಕ್ ಅವರ ಹೆಸರು ಕೇಳಿಬರುತ್ತಿದೆ.