ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಬೆಂಬಲ ನೀಡುವುದಾಗಿ ಪರಿಕ್ಕರ್ ಅವರಿಗೆ ಮಾತು ಕೊಟ್ಟಿದ್ದ ಹಿನ್ನೆಲೆಯಲ್ಲಿ ಪ್ರಮೋದ್ ಸಾವಂತ್ ಅವರ ಸರ್ಕಾರಕ್ಕೆ ಬೆಂಬಲ ನೀಡಿದ್ದೇವು. ಆದರೆ, ಈಗ ಮೋಸ ಹೋಗಿದಂತಾಗಿದೆ. ಕೇಂದ್ರದ ಬಿಜೆಪಿ ವರಿಷ್ಠರಿಂದ ಯಾವುದೇ ಮಾಹಿತಿ ಪಡೆದುಕೊಂಡಿಲ್ಲ. ಮೈತ್ರಿ ಪಕ್ಷಗಳಿಗೆ ಎನ್ ಡಿಎಯಲ್ಲಿ ಸರಿಯಾದ ರೀತಿಯಲ್ಲಿ ನೋಡಿಕೊಳ್ಳುತ್ತಿಲ್ಲ ಎಂದು ಅವರು ಆರೋಪಿಸಿದರು.