ಪ್ರತಿದಿನ 5,000 ಯಾತ್ರಾರ್ಥಿಗಳಿಗೆ ಒಬ್ಬೊಬ್ಬರಾಗಿ ಅಥವಾ ಗುಂಪುಗಳಾಗಿ ಗುರುದ್ವಾರವನ್ನು ಕಾಲ್ನಡಿಗೆಯಲ್ಲಿ ಭೇಟಿ ಮಾಡಲು ಅವಕಾಶ ನೀಡಲಾಗುವುದು ಎಂದು ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ (ಆಂತರಿಕ ಭದ್ರತೆ) ಎಸ್.ಸಿ.ಎಲ್ ದಾಸ್ ಹೇಳಿದ್ದಾರೆ. ಅಂತರಾಷ್ಟ್ರೀಯ ಗಡಿ ವಾಘಾದಲ್ಲಿ ನಡೆದ ರಡನೇ ಜಂಟಿ ಕಾರ್ಯದರ್ಶಿ ಮಟ್ಟದ ದ್ವಿಪಕ್ಷೀಯ ಸಭೆಯ ನಂತರ ದಾಸ್ ಸುದ್ದಿಗಾರರಿಗೆ ಈ ಮಾಹಿತಿ ನೀಡಿದ್ದಾರೆ.