ವಿಶೇಷ ನ್ಯಾಯಾಧೀಶರು, ಮೇ ತಿಂಗಳಲ್ಲಿ ಬರೆದ ಪತ್ರದಲ್ಲಿ, ಅವರು ಸೆಪ್ಟೆಂಬರ್ 30, 2019 ರಂದು ನಿವೃತ್ತರಾಗುವುದಾಗಿ ಹೇಳಿದ್ದಾರೆ. ನ್ಯಾಯಮೂರ್ತಿ ಆರ್.ಎಫ್.ನಾರಿಮನ್ ನೇತೃತ್ವದ ನ್ಯಾಯಪೀಠದ ಮುಂದೆ ಸೋಮವಾರ ಈ ವಿಷಯ ವಿಚಾರಣೆಗೆ ಬಂದಿದ್ದು, ಜುಲೈ 19 ರೊಳಗೆ ಉತ್ತರ ಪ್ರದೇಶ ಸರ್ಕಾರ ಇದಕ್ಕೆ ಪ್ರತಿಕ್ರಿಯೆ ನೀಡುವಂತೆ ಕೋರ್ಟ್ ಕೇಳಿದೆ. ಮಹತ್ವದ ಪ್ರಕರಣಗಳಲ್ಲಿ ವಿಶೇಷ ನ್ಯಾಯಾಧೀಶರ ಅಧಿಕಾರಾವಧಿಯನ್ನು ಅವರು ತೀರ್ಪು ನೀಡುವವರೆಗೂ ವಿಸ್ತರಿಸಲು ಅವಕಾಶವಿದೆ.