ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಮಾಡುತ್ತಿದ್ದ ವಕೀಲ ಪ್ರಣವ್ ಮಿಶ್ರಾ, ಕೆಲಸಕ್ಕೆ ಬರುವಾಗ ಅವರನ್ನು ಅಡ್ಡಗಟ್ಟಿದ್ದ ಕೆಲ ಶಸ್ತ್ರ ಸಜ್ಜಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಸುಮಾರು ಏಳಕ್ಕೂ ಹೆಚ್ಚು ವಕೀಲರ ಹತ್ಯೆಯಾಗಿದ್ದರೂ ಪೊಲೀಸರು ಮೌನ ವಹಿಸಿದ್ದಾರೆ.ಹತ್ಯೆಗಳ ಬಗ್ಗೆ ಸರಿಯಾಗಿ ತನಿಖೆ ನಡೆಯುತ್ತಿಲ್ಲ. ಆರೋಪಿಗಳನ್ನು ಶೀಘ್ರ ಬಂಧಿಸಬೇಕು, ಮೃತನ ಕುಟುಂಬಕ್ಕೆ ಭದ್ರತೆಯೊಂದಿಗೆ 50 ಲಕ್ಷ ಪರಿಹಾರ ನೀಡಬೇಕು ಎಂದು ಮಿಶ್ರಾ ಸ್ನೇಹಿತ ಅರೀಪ್ ಖಾನ್ ಒತ್ತಾಯಿಸಿದ್ದಾರೆ.