ಕುಲಭೂಷಣ್ ಜಾಧವ್ ರನ್ನು ಕೂಡಲೇ ಬಿಡುಗಡೆ ಮಾಡಿ: ಪಾಕಿಸ್ತಾನಕ್ಕೆ ಭಾರತ ಒತ್ತಾಯ

ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್‌ ಅವರಿಗೆ ಪಾಕಿಸ್ತಾನದ ಸೇನಾ ...
ಜೈಶಂಕರ್
ಜೈಶಂಕರ್
ನವದೆಹಲಿ: ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್‌ ಅವರಿಗೆ ಪಾಕಿಸ್ತಾನದ ಸೇನಾ ನ್ಯಾಯಾಲಯವು ನೀಡಿದ್ದ ಮರಣದಂಡನೆಯನ್ನು ಶಿಕ್ಷೆಯನ್ನು ಮರುಪರಿಶೀಲಿಸುವಂತೆ ಅಂತಾರಾಷ್ಟ್ರೀಯ ನ್ಯಾಯಾಲಯ ಆದೇಶ ನೀಡಿದ ನಂತರ ಕುಲಭೂಷಣ್ ಜಾಧವ್ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಪಾಕಿಸ್ತಾನವನ್ನು ಒತ್ತಾಯಿಸಿದೆ.
ಜಾಧವ್ ಅವರನ್ನು ಭಾರತಕ್ಕೆ ಕರೆತರಲು ನಿರಂತರ ಪ್ರಯತ್ನ ಮುಂದುವರಿಸಲಾಗುವುದು ಎಂದು ಹೇಳಿದೆ.
ಈ ಕುರಿತು ಇಂದು ಸದನದಲ್ಲಿ ಹೇಳಿಕೆ ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಜಾಧವ್ ಅವರನ್ನು ಕಂಡು ಭೇಟಿ ಮಾಡಿ ಅವರ ಜೊತೆ ಮಾತನಾಡುವ ಭಾರತದ ಹಕ್ಕನ್ನು ಪಾಕಿಸ್ತಾನ ವಂಚಿಸಿದ್ದಲ್ಲದೆ ಕಾನೂನು ಹೋರಾಟಕ್ಕೆ ಕೂಡ ಅಡ್ಡಿಪಡಿಸಿದಂತೆ ಕಾಣುತ್ತದೆ. ಅವರು ನಿರಪರಾಧಿಯಾಗಿದ್ದು, ಅವರ ವಿರುದ್ಧ ಪಾಕಿಸ್ತಾನ ಮಾಡುತ್ತಿರುವ ಆರೋಪ ನಿರಾಧಾರವಾಗಿದೆ. ಕಾನೂನು ಪ್ರಾತಿನಿಧಿತ್ವವಿಲ್ಲದೆ ಅವರನ್ನು ಒತ್ತಾಯಪೂರ್ವಕವಾಗಿ ತಪ್ಪೊಪ್ಪಿಕೊಳ್ಳುವಂತೆ ಮಾಡಲಾಗಿದೆ ಎಂದು ಹೇಳಿದರು.
ಕುಲಭೂಷಣ ಜಾಧವ್ ಅವರನ್ನು ಕೂಡಲೇ ಬಿಡುಗಡೆ ಮಾಡಿ ಭಾರತಕ್ಕೆ ಕಳುಹಿಸಿ ಎಂದು ಒತ್ತಾಯಿಸುತ್ತೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com