ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠವು, ಮಧ್ಯಸ್ಥಿಕೆ ತಂಡ ಸಲ್ಲಿಸಿದ ವರದಿಯನ್ನು ಪರಿಶೀಲಿಸಿ ಅದರಲ್ಲಿನ ವಿಷಯಗಳನ್ನು ಗಮನಿಸಿ ಜುಲೈ 31ರವರೆಗೆ ಸಂಧಾನ ಮಾತುಕತೆ ಮುಂದುವರಿಸುವಂತೆ ಸೂಚಿಸಿದೆ. ವಿವಾದದ ಕುರಿತ ವಿಚಾರಣೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸಿ ಮುಂದಿನ ವಿಚಾರಣೆ ಆಗಸ್ಟ್ 2 ರಂದು ನಡೆಸಿ, ಮುಂದಿನ ದಿನನಿತ್ಯದ ವಿಚಾರಣೆಗಳು ಹೇಗೆ ಮುಂದುವರಿಯುತ್ತದೆ ಎಂಬುದನ್ನು ಆಗ ತಿಳಿಸುವಂತೆ ನ್ಯಾಯಾಧೀಶರ ತಂಡಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ.