ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಭ್ರಷ್ಟಾಚಾರ ಆರೋಪದ ಮೇಲೆ ತಾವು ಬಿಎಸ್ಎಫ್ ನಿಂದ ವಜಾಗೊಂಡಿಲ್ಲ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ತೇಜ್ ಬಹದ್ದೂರ್ ವಿಫಲವಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ನಾಮಪತ್ತವನ್ನು ತಿರಸ್ಕರಿಸಲಾಗಿತ್ತು. ಆದರೆ ಚುನಾವಣಾ ಅಧಿಕಾರಿಗಳು ಉದ್ದೇಶಪೂರ್ವಕವಾಗಿಯೇ ತಮ್ಮ ನಾಮಪತ್ರ ತಿರಸ್ಕರಿಸಿದ್ದು, ಮೋದಿಯ ಆಯ್ಕೆಯನ್ನು ಅಮಾನ್ಯಗೊಳಿಸಬೇಕು ಎಂದು ಕೋರಿ ಕೋರ್ಟ್ ಮೊರೆ ಹೋಗಿದ್ದರು.