ಉತ್ತರ ಪ್ರದೇಶದ ಬಾರಾಬಂಕಿ ಬಳಿಯ ರಾಘೋಪುರ್ ಎಂಬ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದ್ದು, ತಿಂದೋಲಾ ಗ್ರಾಮದ ನಿವಾಸಿ ಸುಜಿತ್ ಕುಮಾರ್ ಎಂಬಾತ ಇಲ್ಲಿನ ಟಾಯಿ ಕಲಾ ಗ್ರಾಮದಲ್ಲಿರುವ ತನ್ನ ಅತ್ತೆ ಮನೆಗೆ ತೆರಳುತ್ತಿದ್ದ. ವೃತ್ತಿಯಲ್ಲಿ ಪೇಂಟರ್ ಆಗಿರುವ ಸುಜಿತ್ ಕುಮಾರ್ ಶುಕ್ರವಾರ ರಾತ್ರಿ ಹೋಗುತ್ತಿದ್ದಾಗ ನಾಯಿಗಳು ಬೆನ್ನಟ್ಟಿವೆ. ಅದರಿಂದ ಭಯಗೊಂಡ ಸುಜಿತ್ ಕುಮಾರ್, ನಾಯಿಗಳಿಂದ ತಪ್ಪಿಸಿಕೊಳ್ಳಲು ಪಕ್ಕದಲ್ಲೇ ಇದ್ದ ಮನೆಯೊಳಗೆ ನುಗ್ಗಿ ಅವಿತುಕೊಂಡಿದ್ದಾನೆ. ಈ ವೇಳೆ ಮನೆಯವರು ಈತನನ್ನು ಕಂಡು ಕಳ್ಳ ಕಳ್ಳ ಎಂದು ಕೂಗಿದ್ದಾರೆ.