ಭಾರತದ ವಿಜಯದ ನೆನಪಿಗಾಗಿ, ಜುಲೈ 14 ರಂದು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ರಾಜನಾಥ್ ಸಿಂಗ್ ಅವರು 'ವಿಕ್ಟರಿ ಫ್ಲೇಮ್' ಅನ್ನು ಬೆಳಗಿಸಿದರು. ಜುಲೈ 26 ರಂದು ದ್ರಾಸ್ ತಲುಪಲಿರುವ ಈ ಜ್ಯೋತಿಯು ಒಂಬತ್ತು ಪಟ್ಟಣಗಳು ಮತ್ತು ನಗರಗಳ ಮೂಲಕ ಸಂಚರಿಸಲಿದೆ. ನಂತರ ಇದನ್ನು ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಶಾಶ್ವತ ಜ್ಯೋತಿಯೊಡನೆ ವಿಲೀನಗೊಳಿಸಲಾಗುತ್ತದೆ.ಆಪರೇಷನ್ ವಿಜಯ್ನಲ್ಲಿ ಭಾಗವಹಿಸಿದ ಎಲ್ಲಾ ಸೈನಿಕರ ಹೆಮ್ಮೆ ಮತ್ತು ಶೌರ್ಯವನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಭಾರತೀಯ ಸೇನೆಯು ದೊಡ್ಡ ಸಂಭ್ರಮದಿಂದ ಆಚರಿಸುತ್ತಿದೆ.