ಇದೀಗ ಪೊಲೀಸ್ ಸರ್ಪಗಾವಲಿನ ಹೊರತಾಗಿಯೂ ಫೈರಿಂಗ್ ಪ್ರಕರಣದ ಸಂತ್ರಸ್ಥರನ್ನು ಭೇಟಿ ಮಾಡುವಲ್ಲಿ ಪ್ರಿಯಾಂಕಾ ಯಶಸ್ವಿಯಾಗಿದ್ದಾರೆ. ಈ ಕುರಿತಂತೆ ಮಾತನಾಡಿರುವ ಒಟ್ಟು 15 ಸಂತ್ರಸ್ಥ ಕುಟುಂಬಗಳ ಪೈಕಿ ಮೂರು ಕುಟುಂಬಸ್ಥರನ್ನು ಮಾತ್ರ ಭೇಟಿಯಾಗಲು ಸಾಧ್ಯವಾಗಿದ್ದು, ಪೊಲೀಸರು ಉದ್ದೇಶಪೂರ್ವಕವಾಗಿ ತಮ್ಮನ್ನು ಭೇಟಿಯಾಗಲು ಬಂದ ಸಂತ್ರಸ್ಥ ಕುಟುಂಬಸ್ಥರನ್ನು ತಡೆಯುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಗುಂಡಾರಾಜ್ ಚಾಲ್ತಿಯಲ್ಲಿದೆ ಎಂದು ಕಿಡಿಕಾರಿದ್ದಾರೆ. ಈ ಕುರಿತಂತೆ ಮಾಧ್ಯಮಗಳು ಬೆಳಕು ಚೆಲ್ಲಿ ಉತ್ತರ ಪ್ರದೇಶದ ಪರಿಸ್ಥಿತಿ ಜನಸಾಮಾನ್ಯರಿಗೆ ತಿಳಿಯುವಂತೆ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.