ಕೇಂದ್ರ ಸರ್ಕಾರ ಎರಡು ಸಾವಿರ ಕೋಟಿ ರೂ. ಸಾಲ ಪ್ರಸ್ತಾವನೆಯ ಅರ್ಜಿಯನ್ನು ಹಿಂತೆಗೆದುಕೊಂಡ ನಂತರ ವಿಶ್ವಬ್ಯಾಂಕ್ ಈ ನಿರ್ಧಾರಕ್ಕೆ ಬಂದಿದೆ. ಬಲವಂತದ ಭೂ ಸ್ವಾಧೀನದಂತಹ ಅಕ್ರಮಗಳ ಕುರಿತಾದ ದೂರುಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸಲು ವಿಶ್ವ ಬ್ಯಾಂಕ್ ಕೇಂದ್ರದಿಂದ ಅನುಮತಿ ಕೋರಿತು. ಆದರೆ ಕೇಂದ್ರ ಸರ್ಕಾರವು ಅದಕ್ಕೆ ಅನುಮತಿ ನೀಡುವ ಬದಲು ಸಾಲ ಪ್ರಸ್ತಾವನೆಯ ಅರ್ಜಿಯನ್ನೇ ಹಿಂತೆಗೆದುಕೊಂಡಿತ್ತು.