ನಿನ್ನೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ 81 ವರ್ಷದ ಶೀಲಾ ದೀಕ್ಷಿತ್ ಸಾವನ್ನಪ್ಪಿದ್ದರು. ಇಂದು ಮಧ್ಯಾಹ್ನ ದೆಹಲಿಯ ನಿಗಂ ಬೋಧ್ ಘಾಟ್ ನಲ್ಲಿ ಅಂತ್ಯಸಂಸ್ಕಾರ ನೆರವೇರಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಡಿಸಿಎಂ ಮನೀಶ್ ಸಿಸೋಡಿಯಾ, ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ, ಸೇರಿದಂತೆ ಹಲವು ರಾಜಕಾರಣಿಗಳು, ಗಣ್ಯರು ಮತ್ತು ಆತ್ಮೀಯರು ಮೃತರ ಮನೆಗೆ ತೆರಳಿ ಅಂತಿಮ ನಮನ ಸಲ್ಲಿಸಿದ್ದರು.