ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಎಐಸಿಸಿ ಸಂವಹನ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ , “ಚಂದ್ರ ಭಾರತಕ್ಕಾಗಿ ಕಾಯುತ್ತಿದೆ. 11 ವರ್ಷಗಳ ಹಿಂದೆ ‘ಚಂದ್ರಯಾನ-1’ರ ನಂತರ ‘ಚಂದ್ರಯಾನ-2’ ರ ಉಡಾವಣೆ ಯಶಸ್ವಿಯಾಗಿದ್ದು, ಪಯಣ ಆರಂಭವಾಗಿದೆ. ಈ ಸಾಧನೆಗಾಗಿ ಹಗಲಿರುಳು ಶ್ರಮಿಸಿರುವ ಇಸ್ರೋ 130 ಕೋಟಿ ನಾಗರಿಕರ ಹೆಮ್ಮೆಗೆ ಕಾರಣವಾಗಿದೆ” ಎಂದು ಹೇಳಿದ್ದರು.