ಸದನದಲ್ಲಿ ವಿಶ್ವಾಸಮತ ಯಾಚಿಸುವುದಕ್ಕೆ ಸಿಎಂ ಕುಮಾರಸ್ವಾಮಿಗೆ ಸ್ಪೀಕರ್ ರಮೇಶ್ ಕುಮಾರ್ ನೀಡಿರುವ ಗಡುವು ಹತ್ತಿರವಾಗುತ್ತಿದೆ. ಆದರೂ ಸಹ ಸದನ ಪುನಾರಂಭಗೊಳ್ಳುವ ಲಕ್ಷಣಗಳು ಗೋಚರಿಸುತ್ತಿಲ್ಲ. ಈ ನಡುವೆ ರೇವಣ್ಣ, ಸಿದ್ದರಾಮಯ್ಯ ಆದಿಯಾಗಿ ಮೈತ್ರಿ ಪಕ್ಷದ ನಾಯಕರು ಸದನ ಮುಂದೂಡುವಂತೆ ಮನವಿ ಮಾಡಿಕೊಂಡರು. ಆದರೆ ಯಾರ ಮಾತಿಗೂ ಜಗ್ಗದ ಸ್ಪೀಕರ್ ರಮೇಶ್ ಕುಮಾರ್ ನಾನೇ ರಾಜೀನಾಮೆ ನೀಡುತ್ತೇನೆ ಆದರೆ ಸದನ ಮುಂದೂಡುವುದಿಲ್ಲ. ವಿಶ್ವಾಸಮತಯಾಚನೆ ಪ್ರಕ್ರಿಯೆ ಇಂದೇ ಮುಗಿಸಬೇಕು ಎಂದು ಹೇಳಿದ್ದ ಮಾತಿಗೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.