ಮೂಲಗಳ ಪ್ರಕಾರ ಆಂಧ್ರ ಪ್ರದೇಶ ಸರ್ಕಾರ ಜಾರಿಗೆ ತಂದಿರುವ ನೂತನ ಕಾನೂನಿನ ಪ್ರಕಾರ, ಖಾಸಗಿ ಸಂಸ್ಥೆ, ಕಾರ್ಖಾನೆ, ಜಂಟೀ ಸಹಭಾಗಿತ್ವದ ಕಂಪನಿಗಳು ಹಾಗೂ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಶೇ.75 ಉದ್ಯೋಗ ಮೀಸಲಾತಿ ಸಿಗಲಿದೆ. ಆ ಮೂಲಕ ಸ್ಥಳೀಯರಲ್ಲಿ ಕೌಶಲ್ಯ ಇಲ್ಲ ಎನ್ನುವ ಕಾರಣವೊಡ್ಡಿ ಕಂಪನಿಗಳು ಬೇರೆಯವರಿಗೆ ಮಣೆ ಹಾಕುತ್ತಿದ್ದವು. ಇಂತಹ ಜಾಣ ಕುರುಡು ನಡೆಗೆ ಆಂಧ್ರ ಪ್ರದೇಶ ಸರ್ಕಾರ ಬ್ರೇಕ್ ಹಾಕುವ ಕಾರ್ಯ ಮಾಡಿದೆ.