"ಇದಲ್ಲದೆ, ಜನವರಿ 1, 2009 ಮತ್ತು ಅಕ್ಟೋಬರ್ 29, 2018 ರ ನಡುವೆ 254 ಧಾರ್ಮಿಕ ಹಿನ್ನೆಲೆಯ ದ್ವೇಷದ ಅಪರಾಧಗಳು ವರದಿಯಾಗಿದ್ದು, ಅಲ್ಲಿ ಕನಿಷ್ಠ 91 ಜನರು ಸಾವನ್ನಪ್ಪಿದ್ದಾರೆ ಮತ್ತು 579 ಮಂದಿ ಗಾಯಗೊಂಡಿದ್ದಾರೆ ನಾಗರಿಕರಲ್ಲಿನ ಧಾರ್ಮಿಕ ದ್ವೇಷ ಭಾರತದಲ್ಲಿನ (ಒಟ್ಟಾರೆ ಜನಸಂಖ್ಯೆಯ ಶೇ. 14ರಷ್ಟು) ಮುಸ್ಲಿಮರಲ್ಲಿ ಶೇಕಡಾ 62ರಷ್ಟು ಮಂದಿ ಸಂತ್ರಸ್ಥರಾಗಿದ್ದರೆ.ಇನ್ನು ಕ್ರಿಶ್ಚಿಯನ್ನರು (ಜನಸಂಖ್ಯೆಯ ಶೇ. 2) , 14 ಶೇಕಡಾದಷ್ಟು ಮಂದಿ ವಿವಿಧ ಪ್ರಕರಣಗಳಲ್ಲಿ ಸಂತ್ರಸ್ಥರಾಗಿದ್ದಾರೆ. ಇನ್ನು ಮೇ 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇಂತಹಾ ಪ್ರಕರಣಗಳ ಸಂಖ್ಯೆ ಶೇ.90ರಷ್ಟು ಹೆಚ್ಚಾಗಿದೆ. ಹಾಗಾಗಿ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಗುಂಪು ಹಲ್ಲೆ ಖಂಡಿಸಿದ ಮಾತ್ರಕ್ಕೆ ಎಲ್ಲವೂ ಸರಿಹೋಗುವುದಿಲ್ಲ.