ಕಾನೂನು ಬಾಹಿರ ಚಟುವಟಿಕೆಗಳ (ತಡೆ) ತಿದ್ದುಪಡಿ ವಿಧೇಯಕ (ಯುಎಪಿಎ)ದ ಮೇಲಿನ ಚರ್ಚೆಯಲ್ಲಿ ಮಾತನಾಡಿರುವ ಬಿಜೆಪಿ ಸಂಸದ ವಿಷ್ಣು ದಯಾಳ್ ರಾಮ್ ಭಯೋತ್ಪಾದಕರ ಪಟ್ಟಿಯನ್ನು ಹೇಳುವಾಗ ಬಾಯ್ತಪ್ಪಿನಿಂದ ಮಸೂದ್ ಅಜರ್ ನ್ನು ಮಸೂದ್ ಅಜರ್ ಜೀ ಎಂದು ಹೇಳಿದ್ದಾರೆ. "ಭಯೋತ್ಪಾದಕರ ಪಟ್ಟಿಯಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಗೆ ನೇಮಕ ಮಾಡಿಕೊಳ್ಳುತ್ತಿದ್ದ ಶಫಿ ಅರ್ಮಾನ್,ಕರ್ನಾಟಕದ ಭಟ್ಕಳದ ಉಗ್ರ, ಮಸೂದ್ ಅಜರ್ ಜೀ...ಅವರನ್ನೂ ಸೇರಿಸಬೇಕು ಎಂದು ವಿಷ್ಣು ದಯಾಳ್ ರಾಮ್ ಯಡವಟ್ಟು ಮಾಡಿಕೊಂಡಿದ್ದಾರೆ.