ಕರ್ನಾಟಕದ ಮಾದರಿಯಲ್ಲೇ ಮಧ್ಯಪ್ರದೇಶ ಕಾಂಗ್ರೆಸ್ ನಲ್ಲೂ ಭಿನ್ನಮತ: ಸರ್ಕಾರ ಬಿದ್ದರೆ ನಾವು ಹೊಣೆಯಲ್ಲ- ಶಿವರಾಜ್ ಸಿಂಗ್

ಕರ್ನಾಟಕದಲ್ಲಿ ಭಿನ್ನಮತೀಯ ಶಾಸಕರಿಂದ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನಗೊಂಡ ಬೆನ್ನಲ್ಲೆ ಮಧ್ಯಪ್ರದೇಶದ ಕಾಂಗ್ರೆಸ್ ನಲ್ಲೂ ಭಿನ್ನಮತ ತಲೆದೋರಿದೆ.
ಕರ್ನಾಟಕದ ಮಾದರಿಯಲ್ಲೇ ಮಧ್ಯಪ್ರದೇಶ ಕಾಂಗ್ರೆಸ್ ನಲ್ಲೂ ಭಿನ್ನಮತ: ಸರ್ಕಾರ ಬಿದ್ದರೆ ನಾವು ಹೊಣೆಯಲ್ಲ- ಶಿವರಾಜ್ ಸಿಂಗ್
ಕರ್ನಾಟಕದ ಮಾದರಿಯಲ್ಲೇ ಮಧ್ಯಪ್ರದೇಶ ಕಾಂಗ್ರೆಸ್ ನಲ್ಲೂ ಭಿನ್ನಮತ: ಸರ್ಕಾರ ಬಿದ್ದರೆ ನಾವು ಹೊಣೆಯಲ್ಲ- ಶಿವರಾಜ್ ಸಿಂಗ್
ಭೋಪಾಲ್: ಕರ್ನಾಟಕದಲ್ಲಿ ಭಿನ್ನಮತೀಯ ಶಾಸಕರಿಂದ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನಗೊಂಡ ಬೆನ್ನಲ್ಲೆ ಮಧ್ಯಪ್ರದೇಶದ ಕಾಂಗ್ರೆಸ್ ನಲ್ಲೂ ಭಿನ್ನಮತ ತಲೆದೋರಿದೆ. 
ಮಧ್ಯಪ್ರದೇಶದ ಕಾಂಗ್ರೆಸ್ ನಲ್ಲೂ ಕರ್ನಾಟಕದ ಮಾದರಿಯಲ್ಲೇ ಶಾಸಕರು ಬಂಡಾಯವೆದ್ದಿದ್ದಾರೆ ಎಂದು ಅಲ್ಲಿನ ಮಾಜಿ ಸಿಎಂ, ಬಿಜೆಪಿ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. 
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಹಾಗೂ ಬಿಎಸ್ ಪಿ-ಎಸ್ ಪಿ ಬೆಂಬಲದ ನಡುವೆ ಭಿನ್ನಮತ ತಲೆದೋರಿದೆ. ಈ ಕಾರಣದಿಂದಾಗಿ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡರೆ ನಾವೇನು ಮಾಡುವುದಕ್ಕೆ ಆಗುವುದಿಲ್ಲ. ನಮ್ಮನ್ನು ದೂಷಿಸಬೇಡಿ ಎಂದು ಹೇಳಿದ್ದಾರೆ. 
ಶಿವರಾಜ್ ಸಿಂಗ್ ಹೇಳಿಕೆಗೆ ಕಾಂಗ್ರೆಸ್ ನಾಯಕ ಜಿತು ಪಟ್ವಾರಿ ಪ್ರತಿಕ್ರಿಯೆ ನೀಡಿದ್ದು, ಕಮಲ್ ನಾಥ್ ನೇತೃತ್ವದ ಸರ್ಕಾರಕ್ಕೆ ಸಮಸ್ಯೆಗಳನ್ನು ತಂದೊಡ್ಡುವುದಕ್ಕೆ ಬಿಜೆಪಿ ಎಲ್ಲವನ್ನೂ ಮಾಡಿದೆ. ಕುಮಾರಸ್ವಾಮಿ ಸರ್ಕಾರವನ್ನು ಅಷ್ಟೇ ಅಲ್ಲದೇ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರವನ್ನೂ ಸಹ ಪತನಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com