ತಮ್ಮ ಬೇಡಿಕೆ ಮತ್ತು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಅತೃಪ್ತ ಶಾಸಕರು 14 ತಿಂಗಳು ಕಾದು ನೋಡಿದರು. ಅವರ ಮನವಿ ಮತ್ತು ಬೇಡಿಕೆಗಳನ್ನು ಪರಿಗಣಿಸಲು ಅಧಿಕಾರದಲ್ಲಿದ್ದ ಮೈತ್ರಿ ಸರ್ಕಾರದ ನಾಯಕರು ಪ್ರಯತ್ನ ಮಾಡಲಿಲ್ಲ, ಇದರಿಂದ ಆಡಳಿತ ವೈಖರಿಗೆ ಬೇಸತ್ತು ಅತೃಪ್ತ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಮತ್ತೆ ವಾಪಸ್ ಅವರ ಪಕ್ಷಕ್ಕೆ ಹಿಂದಿರುಗುವ ಸಾಧ್ಯತೆಗಳಿಲ್ಲ, ಮೈತ್ರಿ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಅಲ್ಲದೆ ಬಿಎಸ್ಪಿ ಪಕ್ಷ ತನ್ನ ಏಕೈಕ ಶಾಸಕರಾದ ಎನ್. ಮಹೇಶ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರುವುದು ಸಹ ಭವಿಷ್ಯದಲ್ಲಿ ಬಿಜೆಪಿ ಸ್ವಂತ ಸರ್ಕಾರ ರಚಿಸುವಲ್ಲಿ ಸಹಕಾರಿಯಾಗಲಿದೆ. ನಾವು ಹೊಸ ಸರ್ಕಾರ ರಚಿಸುವಲ್ಲಿ ವಿಶ್ವಾಸ ಹೊಂದಿದ್ದೇವೆ ಎಂದು ಹೇಳಿದರು.