'ಸುಳ್ಳು ಪ್ರತಿಪಾದನೆ ಮತ್ತು ಆಯ್ದ ಆಕ್ರೋಶ' ಎಂಬ ತಲೆಬರಹದಡಿ ಬಹಿರಂಗ ಪತ್ರ ಬರೆದಿರುವ ಸೆಲೆಬ್ರಿಟಿಗಳು, ದೇಶದಲ್ಲಿ ಕೆಲವೆಡೆ ನಡೆದ ಸಾಮೂಹಿಕ ಹಲ್ಲೆ ಪ್ರಕರಣಗಳ ಹಿನ್ನೆಲೆಯಲ್ಲಿ ಕೆಲವು ಸೆಲೆಬ್ರಿಟಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು 'ಹಿಂದುತ್ವ ಕುರಿತು ತಪ್ಪು ಕಲ್ಪನೆ' ಮೂಡುವಂತೆ ಮಾಡಿದ ಘಟನೆ ನಡೆದಿತ್ತು. ಈ ರೀತಿ 'ಆಯ್ದ ಆಕ್ರೋಶ ಮತ್ತು ಕಪೋಲಕಲ್ಪಿತ ಕಥನಗಳ ವಿರುದ್ಧ' ಎಂಬ ಶೀರ್ಷಿಕೆಯ ಪತ್ರದಲ್ಲಿ ಗುಂಪು ಹತ್ಯೆಗಳ ಕುರಿತು 'ಸ್ವಯಂ ಘೋಷಿತ ಪೋಷಕರು ಮತ್ತು ಆತ್ಮಸಾಕ್ಷಿಯ ಪಾಲಕರು' ತಮ್ಮ ರಾಜಕೀಯ ಪೂರ್ವಗ್ರಹಗಳ ಹಿನ್ನೆಲೆಯಲ್ಲಿ ಪತ್ರ ಬರೆದಿದ್ದರು ಎಂದು ಆಪಾದಿಸಿದ್ದಾರೆ.