ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ಸಭಾಧ್ಯಕ್ಷರ ಪೀಠದಲ್ಲಿದ್ದ ರಮಾದೇವಿ ಅವರು ‘ಇದು ಮಾತನಾಡುವ ರೀತಿ ಅಲ್ಲ, ಮತ್ತು ಈ ಮಾತುಗಳನ್ನು ಕಡತದಿಂದ ತೆಗೆದು ಹಾಕಿ’ ಎಂದು ಸೂಚನೆ ಕೊಟ್ಟಿದ್ದರು. ತಕ್ಷಣ ಅಜಂಖಾನ್ ಕ್ಷಮೆಯಾಚಿಸಿದ್ದರೆ ಕ್ಷಮಿಸಬಹುದಿತ್ತು. ಆದರೆ, ಹಾಗೆ ಮಾಡದೆ ಆತ ಹೊರಟು ಹೋದ ಎಂದು ಬಿಹಾರದ ಸಂಸದೆ ಆಗಿರುವ ರಮಾದೇವಿ ಹೇಳಿದ್ದಾರೆ.