ಕಳೆದ ಭಾನುವಾರ ಅತ್ಯಾಚಾರ ಸಂತ್ರಸ್ತೆಯ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಹಿಳೆ ಲಖನೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಸಂತ್ರಸ್ತೆಯನ್ನು ಭೇಟಿಮಾಡಿರುವ ಸ್ವಾತಿ ಮಲಿವಾಲ್ ಅವರು, 'ಹೆಚ್ಚಿನ ಚಿಕಿತ್ಸೆಗಾಗಿ ಸಂತ್ರಸ್ತೆಯನ್ನು ದೆಹಲಿಗೆ ಕರೆದೊಯ್ಯಲಾಗುವುದು' ಎಂದು ಹೇಳಿದ್ದರು. ಅಲ್ಲದೆ ಈ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿರುವ ಸ್ವಾತಿ ಮಲಿವಾಲ್ ಅವರು, ಸಂತ್ರಸ್ತೆಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದು, ಆಕೆಯನ್ನು ದೆಹಲಿಗೆ ಕರೆದೊಯ್ಯಲು ತುರ್ತಾಗಿ ಹೆಲಿಕಾಪ್ಟರ್ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದರು.