ಸಮಾವೇಶಗಳಲ್ಲಿ ರಾಜಕೀಯ ಪಕ್ಷಗಳ ಯಾವುದೇ ಘೋಷಣೆಗಳ ಬಗ್ಗೆ ನನಗೆ ತಕರಾರು ಇಲ್ಲ. ಆದರೆ ಜೈ ಸಿಯಾ ರಾಮ್, ಜೈ ರಾಮ್ ಜಿ ಕೀ, ರಾಮ್ ನಾಮ್ ಸತ್ಯ ಹೈ ಈ ಘೋಷಣೆಗಳು ಧಾರ್ಮಿಕ ಹಾಗೂ ಸಾಮಾಜಿಕ ಸಂಬಂಧ ಹೊಂದಿವೆ. ಈ ಭಾವನೆಗಳನ್ನು ನಾವು ಗೌರವಿಸುತ್ತೇವೆ, ಆದರೆ ಜೈ ಶ್ರೀರಾಮ್ ಘೋಷಣೆಯನ್ನು ಬಿಜೆಪಿ ರಾಜಕೀಯವಾಗಿ ಬಳಕೆ ಮಾಡುತ್ತಿದ್ದು, ಧಾರ್ಮಿಕತೆಯನ್ನು ರಾಜಕೀಯದೊಂದಿಗೆ ತಳುಕು ಹಾಕುತ್ತಿದೆ. ಇದು ವಿಧ್ವಂಸಕತೆ ಮತ್ತು ಹಿಂಸೆಯ ಮೂಲಕ ದ್ವೇಷವನ್ನು ಹರಡುವ ಸ್ಪಷ್ಟ ಉದ್ದೇಶ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.