ಸಮಿತಿ ಸಲ್ಲಿಸಿರುವ ಕರಡು ನೀತಿಯಲ್ಲಿ ಈ ಶಿಫಾರಸ್ಸು ಸಲ್ಲಿಸಲಾಗಿದೆ, ಈ ಬಗ್ಗೆ ಸಾರ್ವಜನಿಕರ ಗಮನಕ್ಕೆ ತರಲಾಗುವುದು, ರಾಜ್ಯ ಸರ್ಕಾರಗಳ ಜತೆ ಸಮಾಲೋಚನೆ ನಡೆಸಿ, ಸಾರ್ವಜನಿಕರ ಪ್ರತಿಕ್ರಿಯೆ ಆಲಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಸಮಿತಿ ಸಲ್ಲಿಸಿರುವ ಕರಡು ಶಿಫಾರಸ್ಸು ಮಾತ್ರವಾಗಿದ್ದು, ಸರ್ಕಾರದ ನೀತಿಯಲ್ಲ, ಯಾವುದೇ ಪ್ರದೇಶದ ಮೇಲೆ ಯಾವುದೇ ನಿರ್ದಿಷ್ಟ ಭಾಷೆಯನ್ನು ಹೇರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಹೇಳಿದ್ದಾರೆ ಎಂದು ಕೇಂದ್ರ ಎಚ್ ಆರ್ ಡಿ ಸಚಿವ ರಮೇಶ್ ಪೋಕ್ರಿಯಾಲ್ ನಿಷಾಂಕ್ ಸ್ಪಷ್ಟಪಡಿಸಿದ್ದಾರೆ