ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಭೂ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಖಾತೆ ಹಾಗೂ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ದಿಮೆ ಇಲಾಖೆಗಳು ಹಲವು ಪ್ರಮುಖ ವಿಷಯಗಳನ್ನು ಒಳಗೊಂಡಿವೆ. ದೇಶದ ಬೆಳವಣಿಗೆ ಪ್ರಮಾಣ ಮತ್ತು ಉದ್ಯೋಗದ ಸಾಮರ್ಥ್ಯವನ್ನು ನಿರ್ಧರಿಸುತ್ತವೆ. ಈ ವಲಯದಿಂದ ಉದ್ಯೋಗಾವಕಾಶ ಹೆಚ್ಚಾಗಬೇಕು ಎಂಬುದು ಪ್ರಧಾನಮಂತ್ರಿಯವರ ನಿರೀಕ್ಷೆಯಾಗಿದೆ. ಸದ್ಯ ನಮ್ಮಲ್ಲಿ ಉದ್ಯೋಗ ಸೃಷ್ಟಿ ಮಾಡುವುದು ತುಂಬ ಅಗತ್ಯ. ತಮ್ಮ ಸರ್ಕಾರದ ಆದ್ಯತೆ ಕೂಡ ಉದ್ಯೋಗ ಸೃಷ್ಟಿಗೇ ಎಂದು ನಿತಿನ್ ಗಡ್ಕರಿ ತಿಳಿಸಿದರು.