ಕೊಲ್ಕತ್ತಾ: ಲೋಕಸಭಾ ಚುನಾವಣೆಯಲ್ಲಿ ಬಳಸಲಾದ ವಿಇಎಂಗಳ ವಿಶ್ವಾಸಾರ್ಹತೆ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದು, ಮತ್ತೆ ಬ್ಯಾಲೆಟ್ ಕಾಗದದಲ್ಲಿ ಚುನಾವಣೆಗಾಗಿ ಪ್ರತಿಪಕ್ಷಗಳು ಒಗ್ಗಟ್ಟಾಗಿ ಹೋರಾಡುವಂತೆ ಆಗ್ರಹಿಸಿದ್ದಾರೆ.
ಇವಿಎಂಗಳ ಮಾಹಿತಿ ಕಂಡುಹಿಡಿಯಲು ಸತ್ಯ ಶೋಧನಾ ಸಮಿತಿ ರಚಿಸಬೇಕು ಎಂದು ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ. ಪ್ರಜಾಪ್ರಭುತ್ವವನ್ನು ನಾವುಗಳು ರಕ್ಷಿಸಬೇಕಾಗಿದೆ. ನಮ್ಮಗೆ ಇವಿಎಂಗಳು ಬೇಡ. ಮತ್ತೆ ಬ್ಯಾಲೆಟ್ ಪೇಪರ್ ವ್ಯವಸ್ಥೆಗೆ ಹೋರಾಡಬೇಕಾಗಿದೆ. ಇದಕ್ಕಾಗಿ ಆಂದೋಲನ ಆರಂಭಿಸುತ್ತೇವೆ. ಬಂಗಾಳದಿಂದಲೇ ಅದು ಪ್ರಾರಂಭವಾಗಲಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Advertisement