ಕಚೇರಿ ವಾರ್: ಬಿಜೆಪಿ ಕಚೇರಿಯ ಬಾಗಿಲು ಮುರಿದು ಟಿಎಂಸಿ ಚಿಹ್ನೆ ಬಿಡಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವೆ ಕಚೇರಿ ವಶಪಡಿಸಿಕೊಂಡಿರುವ ಆರೋಪ ಪ್ರತ್ಯಾರೋಪ ಕೇಳಿಬಂದಿದ್ದು...
ಕಚೇರಿ ವಾರ್: ಬಿಜೆಪಿ ಕಚೇರಿಯ ಬಾಗಿಲು ಮುರಿದು ಟಿಎಂಸಿ ಚಿಹ್ನೆ ಬಿಡಿಸಿದ ಮಮತಾ ಬ್ಯಾನರ್ಜಿ
ಕಚೇರಿ ವಾರ್: ಬಿಜೆಪಿ ಕಚೇರಿಯ ಬಾಗಿಲು ಮುರಿದು ಟಿಎಂಸಿ ಚಿಹ್ನೆ ಬಿಡಿಸಿದ ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವೆ ಕಚೇರಿ ವಶಪಡಿಸಿಕೊಂಡಿರುವ ಆರೋಪ  ಪ್ರತ್ಯಾರೋಪ ಕೇಳಿಬಂದಿದ್ದು, ಸಿಎಂ ಮಮತಾ ಬ್ಯಾನರ್ಜಿ ಸ್ವತಃ ಬಿಜೆಪಿ ಕಚೇರಿಯ ಬಾಗಿಲು ಮುರಿದು ಅಲ್ಲಿ ಟಿಎಂಸಿ ಚಿಹ್ನೆ ಬಿಡಿಸಿ ಬಂದಿದ್ದಾರೆ. 
ಕಚೇರಿಯ ಕೇಸರಿ ಬಣ್ಣದ ಗೋಡೆಯ ಮೇಲೆ ತೃಣಮೂಲ ಕಾಂಗ್ರೆಸ್ ನ ಚಿಹ್ನೆಯನ್ನು ಬರೆದಿದ್ದಾರೆ ಮಮತಾ ಬ್ಯಾನರ್ಜಿ, ಇದಕ್ಕೂ ಮುನ್ನ ತೃಣ ಮೂಲ ಕಾಂಗ್ರೆಸ್ ನ ಕಾರ್ಯಕರ್ತರು ತಮ್ಮ ಕಚೇರಿಯನ್ನು ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ಆಯ್ಕೆಗೊಂಡ ಸಂಸದ ಅರ್ಜುನ್ ಸಿಂಗ್ ಅವರ ಬೆಂಬಲಿಗರು ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಲೋಕಸಭಾ ಚುನಾವಣೆ ಫಲಿತಾಂಶ ಬಂದ ನಂತರ ಈ ಘಟನೆ ನಡೆದಿದ್ದು, ಮಮತಾ ಬ್ಯಾನರ್ಜಿ ಕಾರ್ಯಕರ್ತರನ್ನುದ್ದೇಶಿಸಿ ಬಿಜೆಪಿ ಕಚೇರಿಗೆ ತೆರಳಿ, ಬಿಜೆಪಿ ಚಿಹ್ನೆಯನ್ನು ತೆಗೆದು ಟಿಎಂಸಿ ಚಿಹ್ನೆಯನ್ನು ಬರೆದಿದ್ದಾರೆ ಎಂದು ವರದಿ ಪ್ರಕಟವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com