ಶನಿವಾರ ತಡರಾತ್ರಿ ಮಗನನ್ನು ಫ್ಯಾನ್ಗೆ ನೇಣು ಹಾಕಿ ಕೊಂದಿದ್ದ ಸುರೇಶ್, ಪತ್ನಿಗೂ ಆತ್ಮಹತ್ಯೆ ಮಾಡಿಕೊಳ್ಳುವಂತೆ ಹೇಳಿದ್ದ. ಅದರಂತೆ ಗೀತಾಬಾಯಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವರಿಬ್ಬರ ಸಾವು ಕಂಡು ಗಾಬರಿಗೊಂಡ ಮಗಳು, ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲವೆಂದು ಕೂಗಾಡಿದ್ದಳು. ಆಗ ಸುರೇಶ್, ಆತ್ಮಹತ್ಯೆ ಮಾಡಿಕೊಳ್ಳದೆ ಮಗಳನ್ನು ಕರೆದುಕೊಂಡು ಹೊರಗೆ ಬಂದು ಕೊಠಡಿ ಬಾಗಿಲು ಹಾಕಿದ್ದಾನೆ ಎಂಬ ಸಂಗತಿ ತನಿಖೆಯಿಂದ ಗೊತ್ತಾಗಿದೆ ಎಂದು ಅವರು ತಿಳಿಸಿದರು.