ಚುನಾವಣಾ ಫಲಿತಾಂಶ ಬಂದ ಬೆನ್ನಲ್ಲೇ ಇಮ್ರಾನ್ ಖಾನ್ ಪ್ರಧಾನಿಗೆ ಶುಭಾಶಯ ತಿಳಿಸಿ, ಶಾಂತಿ ಮಾತುಕತೆ ಬಗ್ಗೆ ಮಾತನಾಡಿದ್ದರು. ಆದರೆ ಪಾಕಿಸ್ತಾನದಲ್ಲಿ ಭಾರತೀಯ ಹೈಕಮಿಷನ್ ನ ಆಹ್ವಾನದ ಮೇರೆಗೆ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದವರಿಗೆ ಕಿರುಕುಳ ನೀಡುವುದನ್ನೂ ಶಾಂತಿ ಸ್ಥಾಪನೆಯ ಭಾಗವೆಂದು ಪರಿಗಣಿಸಬೇಕೆ? ಎಂದು ಠಾಕ್ರೆ ಪ್ರಶ್ನಿಸಿದ್ದಾರೆ.