ಚಂಡೀಗಢ: ಫಸಲ್ ಬೀಮಾ ಯೋಜನೆಯನ್ನು ಪರಿವರ್ತನೆ ಮಾಡಿ, ರಾಷ್ಟ್ರಮಟ್ಟದಲ್ಲಿ ಕೃಷಿ ಸಾಲಮನ್ನಾ ಯೋಜನೆಯನ್ನು ಒಂದು ಬಾರಿ ಜಾರಿಗೆ ತಂದು, ರೈತರನ್ನು ಎಲ್ಲಾ ಕಷ್ಟಗಳಿಂದ ಪಾರು ಮಾಡಲು ಪ್ರಥಮ ಆದ್ಯತೆ ನೀಡಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.