ಉತ್ತರ ಪ್ರದೇಶದ ರಾಷ್ಟ್ರೀಯ ಲೋಕದಳ ಅಧ್ಯಕ್ಷ ಮಸೂದ್ ಅಹ್ಮದ್, ಘಟಬಂಧನಕ್ಕೆ ಇದರಿಂದ ಯಾವುದೇ ಅಡ್ಡಿಯುಂಟಾಗುವುದಿಲ್ಲ, ಅದು ಅಖಂಡವಾಗಿರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆಯ 11 ಕ್ಷೇತ್ರಗಳ ಉಪ ಚುನಾವಣೆಯನ್ನು ಆರ್ ಎಲ್ ಡಿ ಏಕಾಂಗಿಯಾಗಿ ಎದುರಿಸಲಿದೆ. ಆದರೆ ರಾಜ್ಯದ ರಾಜಕೀಯ ಸ್ಥಿತಿಗತಿ ಬಗ್ಗೆ ಈಗಲೇ ಹೇಳುವುದು ಮತ್ತು ತೀರ್ಮಾನಕ್ಕೆ ಬರುವುದು ಕಷ್ಟ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದಾರೆ.