ಕೂಚ್ ಬೆಹರ್ ಪ್ರದೇಶದಲ್ಲಿ ಟಿಎಂಸಿ ಕಾರ್ಯಕರ್ತ ರೆಹಮಾನ್ ನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕರ ಆರೋಪಗಳ ವಿರುದ್ಧ ಕಿಡಿಕಾರಿರುವ ಕೂಚ್ ಬೆಹರ್ ನ ಬಿಜೆಪಿ ಮುಖಂಡ ನಿಸಿತ್ ಪ್ರಮಾಣಿಕ್ ಅವರು, ಈ ಕೊಲೆಗೂ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ವೈಯುಕ್ತಿಕ ದ್ವೇಷದಿಂದ ಈ ಕೊಲೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಮೃತನ ಕುಟುಂಬಸ್ಥರೇ ಸ್ಪಷ್ಟಪಡಿಸಿದ್ದು, ವೈಯುಕ್ತಿಕ ದ್ವೇಷದಿಂದ ಕೊಲೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಹೀಗಿದ್ದೂ ಟಿಎಂಸಿ ಈ ಪ್ರಕರಣದಲ್ಲಿ ಬಿಜೆಪಿಯನ್ನು ಎಳೆದು ತರುವ ಮೂಲಕ ಪ್ರಕರಣಕ್ಕೆ ಅನಗತ್ಯವಾಗಿ ರಾಜಕೀಯ ಬಣ್ಣ ಬಳಿಯುತ್ತಿದೆ ಎಂದು ಹೇಳಿದ್ದಾರೆ.