ಕಳೆದ ಎರಡು ದಿನಗಳ ಹಿಂದಷ್ಟೇ ಟಿಎಂಸಿ ಮುಖಂಡ ನಿರ್ಮಲ್ ಕುಂಡು ಅವರನ್ನು ಕೋಲ್ಕತಾದ ಡುಂಡುಂ ಪ್ರದೇಶದಲ್ಲಿ ಗುಂಡು ಹಾರಿಸಿ ಕೊಲೆಗೈಯ್ಯಲಾಗಿತ್ತು. ಈ ಪ್ರಕರಣ ಹಸಿರಾಗಿರುವಾಗಲೇ ಅಂತಹುದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಕೂಚ್ ಬೆಹರ್ ಪ್ರದೇಶದಲ್ಲಿ ಟಿಎಂಸಿ ಕಾರ್ಯಕರ್ತನೋರ್ವನನ್ನು ಕೊಲೆಗೈಯ್ಯಲಾಗಿದೆ. ಕೇವಲ ಒಂದು ವಾರದ ಅವಧಿಯಲ್ಲಿ ಇದು 2ನೇ ಪ್ರಕರಣವಾಗಿದ್ದು, ಬಂಗಾಳ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.