ಕೊಚ್ಚಿ ವಿಮಾನ ನಿಲ್ದಾಣಕ್ಕೆ ಕಳೆದ ರಾತ್ರಿ ಆಗಮಿಸಿದ ಪ್ರಧಾನಿ ಮೋದಿಯನ್ನು ಔಪಚಾರಿಕವಾಗಿ ಕೇರಳ ರಾಜ್ಯಪಾಲ ಪಿ ಸತಾಸಿವಂ, ಕೇಂದ್ರದ ನಾಯಕರು ಮತ್ತು ಕೇರಳ ಸರ್ಕಾರದ ವತಿಯಿಂದ ಸ್ವಾಗತಿಸಲಾಯಿತು. ಅಲ್ಲಿಂದ ನೌಕಾಪಡೆಯ ವಿಶೇಷ ಹೆಲಿಕಾಪ್ಟರ್ ನಲ್ಲಿ ಶ್ರೀಕೃಷ್ಣ ಕಾಲೇಜಿನ ಮೈದಾನದಲ್ಲಿ 9.50ರ ವೇಳೆಗೆ ಬಂದಿಳಿದರು.ಅಲ್ಲಿಂದ ನೇರವಾಗಿ ಗುರುವಾಯೂರು ದೇವಸ್ಥಾನಕ್ಕೆ ತೆರಳಿದರು. ಈ ಸಂದರ್ಭದಲ್ಲಿ ತೀವ್ರ ಭದ್ರತೆ ಒದಗಿಸಲಾಗಿತ್ತು.