ಅಗರ್ತಲಾದಲ್ಲಿ ನಡೆದ ಬಿಜೆಪಿ ಪಕ್ಷದ ವಿಜಯಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ರಾಮ್ ಮಾಧವ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ ಜನ ಭರವಸೆ ಇರಿಸಿದ್ದಾರೆ. ಇದೇ ಕಾರಣಕ್ಕೆ ಸತತ 2ನೇ ಬಾರಿಗೂ ಭರ್ಜರಿ ಗೆಲುವು ನೀಡಿದ್ದಾರೆ. ಮೋದಿ ಸರ್ಕಾರ ದೇಶದಲ್ಲಿನ ಕೋಮು ಸಂಘರ್ಷ, ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕಿದ್ದು, ಬಲಿಷ್ಠ ಭಾರತದ ನಿರ್ಮಾಣ ಮಾಡುತ್ತಿದೆ. ವಿತ್ತೀಯ ಸ್ಥಿರತೆ ಸಾಧಿಸಿದೆ ಎಂದು ಹೇಳಿದ್ದಾರೆ.