ವಾಯು ಚಂಡಮಾರುತ ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಸೇವೆ ವ್ಯತ್ಯಯ

ವಾಯು ಚಂಡಮಾರುತದ ಪರಿಣಾಮವಾಗಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಗುಜರಾತ್ ನ 5 ವಿಮಾನ ನಿಲ್ದಾಣಗಳಲ್ಲಿ ಸೇವೆ ವ್ಯತ್ಯಯವಾಗಲಿದೆ ಎಂದು ಹೇಳಿದೆ.
ವಾಯು ಚಂಡಮಾರುತ ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಸೇವೆ ವ್ಯತ್ಯಯ
ವಾಯು ಚಂಡಮಾರುತ ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಸೇವೆ ವ್ಯತ್ಯಯ
ನವದೆಹಲಿ: ವಾಯು ಚಂಡಮಾರುತದ ಪರಿಣಾಮವಾಗಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಗುಜರಾತ್ ನ 5 ವಿಮಾನ ನಿಲ್ದಾಣಗಳಲ್ಲಿ ಸೇವೆ ವ್ಯತ್ಯಯವಾಗಲಿದೆ ಎಂದು ಹೇಳಿದೆ. 
ಮುಂದಿನ 24 ಗಂಟೆಗಳಲ್ಲಿ ಗುಜರಾತ್ ನ 5 ವಿಮಾನ ನಿಲ್ದಾಣಗಳು ಸ್ಥಗಿತಗೊಳ್ಳಲಿದ್ದು, ವಿಮಾನ ನಿಲ್ದಾಣದ ಮೂಲಸೌಕರ್ಯಗಳಿಗೆ ಚಂಡಮಾರುತದಿಂದ ಉಂಟಾಗುವ ನಷ್ಟವನ್ನು ಹಾಗೂ ಪ್ರಯಾಣಿಕರಿಗೆ ಉಂಟಾಗುವ ಅನಾನುಕೂಲವನ್ನು ತಡೆಗಟ್ಟಲು ಸೇವೆಗಳನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾಧಿಕಾರ ಹೇಳಿದೆ. 
ಇದೇ ವೇಳೆ ಗುಜರಾತ್ ನಲ್ಲಿ ಸೌರಾಷ್ಟ್ರ ಹಾಗೂ ಕಚ್ ಪ್ರದೇಶದಿಂದ ಸುಮಾರು 3 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಇದೇ ವೇಳೆ ರೈಲು ಸೇವೆಗಳಲ್ಲಿಯೂ ವ್ಯತ್ಯಯ ಉಂಟಾಗಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com