ತಮ್ಮ ಷರತ್ತುಗಳನ್ನು ಪಟ್ಟಿ ಮಾಡಿದ ದತ್ತ ಅವರು, ಮುಖ್ಯಮಂತ್ರಿಗಳು ಬೇಷರತ್ ಕ್ಷಮೆಯಾಚಿಸಬೇಕು, ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ವೈದ್ಯರ ಆರೋಗ್ಯ ವಿಚಾರಿಸಬೇಕು. ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ನೀಡಬೇಕು. ವೈದ್ಯರಿಗೆ ರಕ್ಷಣೆ ನೀಡದ ಪೊಲೀಸರ ವಿರುದ್ಧ ನ್ಯಾಯಾಂಗ ತನಿಖೆಗೆ ನಡೆಸಬೇಕು. ಅಲ್ಲದೆ ನಮ್ಮ ಮೇಲೆ ದಾಳಿ ನಡೆಸಿದವರ ವಿರುದ್ಧ ಕ್ರಮ ತೆಗೆದುಕೊಂಡ ಬಗ್ಗೆ ದಾಖಲೆ ನೀಡಬೇಕು ಎಂದು ವೈದ್ಯರು ಆಗ್ರಹಿಸಿದ್ದಾರೆ.