ನಿನ್ನೆ ರಾತ್ರಿಯೇ ಮುಷ್ಕರ ನಿರತ ವೈದ್ಯರು ಮಮತಾ ಬ್ಯಾನರ್ಜಿ ಅವರೊಂದಿಗೆ ಚರ್ಚೆಗೆ ಮುಂದಾಗಿದ್ದರು. ಆದರೆ ಮಮತಾ ಬ್ಯಾನರ್ಜಿ ರಾತ್ರಿ ಸಾಧ್ಯವಿಲ್ಲ ಎಂದು ಹೇಳಿ ಇಂದು ಸಂಜೆ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ. ಇನ್ನು ವೈದ್ಯರ ಮುಷ್ಕರದಿಂದಾಗಿ ಬಂಗಾಳದಲ್ಲಿ ಸತತ ನಾಲ್ಕನೇ ದಿನವೂ ಸರ್ಕಾರಿ ಆಸ್ಪತ್ರೆಗಳ ಸೇವೆಯಲ್ಲಿ ವ್ಯತ್ಯವಾಗಿದ್ದು, ಇಂದೂ ಕೂಡ ಸಾವಿರಾರು ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ.